Monday, December 3, 2012

ಬದುಕ ಮನ್ನಿಸು ಮನವೇ

   
ಬದುಕ ಮನ್ನಿಸು ಮನವೇ...

ಸಮಸ್ಯೆಯಾದರೆ  ಪರಿಹರಿಸಿಕೊಳ್ಳಬಹುದು , ದುಃಖವಾದರೆ ಇಂತಿಷ್ಟು ಕಾಲ ಅಂತಿರುತ್ತದೆ, ನಂತರ ಅದರ ತೀವ್ರತೆ ಕಡಿಮೆಯಾಗಿ ಮರೆತುಬಿಡಬಹುದು. ಬದುಕು ಎಂಬ ಇಡೀ ಪ್ಯಾಕೇಜ್ ನಲ್ಲಿ  'ಒಂದು ಸಮಸ್ಯೆಯ'  ಆಯುಷ್ಯ  ತುಂಬಾ ಚಿಕ್ಕದು. ಏನೇ ಆದರೂ ಬದುಕು ಹಾಗೆ ಸಾಗುತ್ತಿರುತ್ತದೆ. ಆದರೆ ಕೆಲವೇ ಕೆಲವು  ಸಂಗತಿಗಳು ಮಾತ್ರ  ಪ್ರತಿಕ್ಷಣದ ಬದುಕನ್ನೂ  ಸವಾಲಿಗೊಡ್ದುವಂತದ್ದು .

               
 ಹೇಳಲು ಹೊರಟಿರುವುದು ಬುದ್ದಿಮಾಂದ್ಯ ಅಂತ ಇರುತ್ತಾರಲ್ಲ ಅಂತ ಮಕ್ಕಳ ಬಗ್ಗೆ, ಅವರ ತಂದೆ ತಾಯಿಯರ ಬಗ್ಗೆ,  ಅಂತವರಿಗೆ ಜೀವನದ ಪ್ರತಿ ಕ್ಷಣವೂ ಹೊರಾಟ, ಪ್ರತಿ ಹೆಜ್ಜೆಯೂ ಸವಾಲು , ಪ್ರತಿ ನಗುವಿನ ಹಿಂದೊಂದು ನೋವಿನ ಸೆಲೆಯನ್ನು ಎದುರಿಗೆ ಬಾರದಂತೆ ತಡೆದು ನಿಲ್ಲಿಸಿಕೊಂಡಿರುತ್ತಾರೆ.  ಅದು ನಮ್ಮ ನಿಮ್ಮ ದುಃಖಗಳ  ಹಾಗೆ ಇವತ್ತಿದ್ದು ನಾಳೆ ಹೊರಟುಬಿಡುವಂತದ್ದಲ್ಲ , ಯಾರೋ ಸಾವಿನಲ್ಲಿ ಆಗಲಿದ ದುಃಖ ಕೂಡ ಒಂದು ಕಾಲದ ಮಿತಿಯಲ್ಲಷ್ಟೇ  ನಮ್ಮನ್ನು ನರಳಿಸಬಹುದು. ಇದು ಹಾಗೂ ಅಲ್ಲ.



ಮೊನ್ನೆ ಯಾವೊದೋ ಕಾರಣಕ್ಕಾಗಿ ಮಣಿಪಾಲ ಆಸ್ಪತ್ರೆಗೆ ಹೋಗಿದ್ದೆ,  ವಿಸಿಟರ್ಸ್ ಸೀಟ್ ನಲ್ಲಿ ಕುಳಿತ 5 ನಿಮಿಷಕ್ಕೆ ನನ್ನ ಎದುರಿಗೆ ಒಬ್ಬ ತಾಯಿ ಮಗಳು ಬಂದು ಕುಳಿತರು. ಮಗಳು ವಿಚಿತ್ರವಾಗಿ ಶಬ್ದ ಹೊರಳಿಸುತ್ತ  ಏನೋ  ಹೇಳಲು ಪ್ರಯತ್ನಿಸುತ್ತಿದ್ದಳು ಆಕೆಗೆ ತನ್ನ ನಾಲಿಗೆ  ತುಟಿ ಅಂಗಾಂಗಗಳ ಮೇಲೆ ಎಚ್ಚರವಿರಲಿಲ್ಲ, ಅವರಮ್ಮ ಆಕೆಯನ್ನು ಸಂಬಾಳಿಸುವುದರಲ್ಲಿ  ಸೋಲುತ್ತಿದ್ದರು.  ಅವರ ಮುಖದಲ್ಲಿದ್ದ ಆ ನೋವು, ಮುಜುಗರ, ಆಳವಾದ ಕಣ್ಣಲ್ಲಿದ್ದ ಅತಿಯಾದ ನೋವು...,  ನನಗೆ ಇಂಥ ದೃಶ್ಯಗಳನ್ನು ನೋಡಲು ಮನಸು ಸಹಕರಿಸದು.., ಗಂಟಲುಬ್ಬಿ ಕಣ್ಣು ತುಂಬಿ ಬಂತು. ಟಿಪಾಯಿ ಮೇಲಿದ್ದ ನ್ಯೂಸ್ ಪೇಪರ್ ಮುಖಕ್ಕೆ ಅಡ್ಡ ಹಿಡಿದೆ. ಸುಮ್ಮನೆ  ಯೋಚಿಸಿದೆ.. ನಮ್ಮ ಚಿಕ್ಕ ಪುಟ್ಟ ಸಮಸ್ಯೆಗಳ ಸುತ್ತವೇ ನಮ್ಮ ಮನಸು ಸುತ್ತುತ್ತಿದ್ದರೆ...., ಅವರ ಮನಸು ಹೇಗಿರಬಹುದು..!  ಸೀರೆ, ಮನೆ ಅದು, ಇದು   ಅಂತ ಯೋಚಿಸುತ್ತಿದ್ದರೆ ಆಕೆಯ ಪ್ರಿಯರಿಟಿ ಏನಿರಬಹುದು ??  ನಮ್ಮ ಮಗ, ಮಗಳು  A ಗ್ರೇಡ್ ಬಂದಿಲ್ಲವಲ್ಲ ಅಂತ ಚಿಂತಿಸುತ್ತಿದ್ದರೆ ಆಕೆ ಏನು ಚಿಂತಿಸುತ್ತಿರಬಹುದು ? ಮತ್ತೂ ಎಂದರೆ ಇಂತ ವಿಷಯಗಳಲ್ಲಿ ತಾಯಿಯನ್ನು ಕಾಡುವ ಮತ್ತೊದು ಯೋಚನೆ... ಮಗು ಹೆಣ್ನಾಗಿದ್ದರೆ ಪ್ರಕೃತಿ ಕೊಡಮಾಡುವ ಅನೇಕ  ಘಟ್ಟಗಳು..!  'ನಾನು ಇರುವ ತನಕ ನೋಡಿಕೊಳ್ಳಬಲ್ಲೆ ಮುಂದೇನು?' ಎನ್ನುವ ವಿಚಾರವೊಂದು ಆಕೆಯ ಸುತ್ತ ಗಿರಾಕಿ ಹೊಡೆಯುತ್ತಿರುತ್ತದೆ.  ಮನಸ್ಸು ಭಾರವಾಗಿತ್ತು. ನಾವು ಯಾವು ಯಾವುದೋ ವಿಷಯಗಳಿಗೆ ದುಃಖಿಸುತ್ತೆವಲ್ಲ ಅಂತ ಆ ಕ್ಷಣಕ್ಕೆ  ಅನಿಸಿಬಿಟ್ಟಿತು ನನಗೆ.

ಮನೆಗೆ ಬಂದವಳೇ ಗೂಗಲ್ ಒಳಗೆ ಹೋಗಿ ಕುಳಿತುಕೊಂಡೆ ..,  ಈ ತರದ ಮಕ್ಕಳ ಬಗ್ಗೆ ಸಾಕಷ್ಟು ಓದಿದೆ, ಓದುತ್ತಿದ್ದ ಹಾಗೆ ಸ್ವಲ್ಪ ಸಮದಾನವಾದ ಹಾಗಾಯಿತು , ಕೆಲವನ್ನು ಬದಲಾಯಿಸಲು ಸಾಧ್ಯವಿಲ್ಲವಲ್ಲ...?  ಅದರ ಜೊತೆಗೆ ಬದುಕನ್ನು ಅಭ್ಯಸಿಸಿಕೊಳ್ಳಬೇಕು, ಸುಂದರವಾದ ಬದುಕನ್ನು ರೂಪಿಸಿಕೊಳ್ಳಬೇಕು. ಅರುಣಶೌರಿಯವರು ನಿಮಗೆ ಗೊತ್ತಿರಬಹುದು,  ಅವರಿಗೆ ಒಬ್ಬ ಮಗನಿದ್ದಾನೆ.., ಅವನ ಬಗ್ಗೆ ಶೌರಿಯಯವರು ಏನೆನ್ನುತ್ತಾರೆ ಗೊತ್ತಾ..? " ನನಗೆ ನನ್ನ ಮಗ ಕೊಡುವ ಕಾನ್ಫಿಡೆನ್ಸ್ ತುಂಬಾ ದೊಡ್ಡದು, ಏಕೆಂದರೆ ಅವನು ನಾನು  ಎದ್ದಾಗಲೂ  ಬಿದ್ದಾಗಲೂ ನನ್ನನ್ನು ಒಂದೇ ತರಾ ನೋಡುತ್ತಾನೆ ",  ಎನ್ನುತ್ತಾರೆ , ವಿಷಯ ಅಂದರೆ..  ಅವರ ಮಗ   ಮೆಂಟಲಿ ಚಾಲೆಂಜ್ಡ್ ! . ಇನ್ನೊಬ್ಬ ತಂದೆಗೆ 2 ಗಂಡುಮಕ್ಕಳು.., ಒಬ್ಬ ಬುದ್ದಿಮಾಂದ್ಯ , ಇನ್ನೊಬ್ಬ ಅತಿ ಬುದ್ದಿವಂತ , ಅವನೇನು ಅನ್ನುತ್ತಾನೆ ಅಂದರೆ, " ನಂಗೆ  ಇಬ್ಬರೂ ಮಕ್ಕಳು ಸಮಾನರು ಇವನು ಚಿನ್ನದ ಪದಕ ತಂದಾಗ ಆಗುವಷ್ಟೇ ಸಂತೋಷ ಆತ  ತನ್ನ ಶೂ ಲ್ಯೇಸ್ ನ್ನು ತಾನೇ ಕಟ್ಟಿಕೊಂಡಾಗ ಅನುಬವಿಸುತ್ತೇನೆ" ಎನ್ನುತ್ತಾನೆ. ಇಂತಹ ಅನೇಕ ಉದಾಹರಣೆ ಓದಿದಾಗ ಮನಸು ಸ್ವಲ್ಪ ತಹಬದಿಗೆ ಬಂದಿತ್ತು.


ಮೊದಲು  ಸಮಾಜ ಅಂತವರನ್ನು ಯಾವುದೇ ಕಾರಣಕ್ಕೂ ಕರುಣೆಯ ದೃಷ್ಟಿಯಿಂದ ನೋಡಬಾರದು, ಸಹಜತೆ ಇರಬೇಕು ನಡೆ ನುಡಿ  ನೋಟದಲ್ಲಿ , ಇನ್ನೂ ಎಂದರೆ ಪರೀಕ್ಷೆಯಲ್ಲಿ ನಮಗಿಂತ ಜಾಸ್ತಿ ಅಂಕ ತೆಗೆದುಕೊಂಡವರೆಡೆಗೊಂದು  ನಮಗೆ ಗೌರವ ಇರುತ್ತಲ್ಲ ಅಂತದೊಂದು ಗೌರವವಿರಬೇಕು ಅವರ ಪಾಲಕರೆಡೆಗೆ , ಏಕೆಂದರೆ ಬದುಕನ್ನು ಅವರು ನಮಗಿಂತ ತೀವ್ರವಾಗಿ, ಆಳವಾಗಿ ಅನುಭವಿಸುವವರು.  ನಾನೂ ಅಂತವರಿಗೆ ಮುಂದೊಂದು ದಿನ ಏನಾದರೂ ಮಾಡಬೇಕು ಅನಿಸಿದ್ದಂತೂ ನಿಜ.

ಕಡೇ ಪಕ್ಷ.....

  ಸಮಸ್ಯೆಗಳು, ನೋವು,  ದುಃಖ  ಇವುಗಳಿಂದ ಹೊರತಾಗಿರಲಂತೂ ಸಾದ್ಯವಿಲ್ಲದೆ ಇರಬಹುದು....,  ಅಟ್ಲೀಸ್ಟ್ ದುಃಖ  ಪಡುವಷ್ಟು ಆ ದುಃಖ  'ವರ್ತ್' ಆಗಿರಲಿ...,  ಪಟ್ಟ ಪ್ರತಿ ದುಃಖವೂ ಅನುಭವವಾಗಿ ಮನಸ್ಸು ಇನ್ನೂ ಪಕ್ವವಾಗಲಿ...,   ಆಗದ, ಹೋಗದ,  ಇಲ್ಲದ, ಸಲ್ಲದ, ಬೇಡದ  ವಿಷಯಗಳಿಗೆ ಕೊರಗುವುದನ್ನು ದುಃಖಿಸುವುದನ್ನು ನಮ್ಮ  ಮನಸು ಮೊದಲು ನಿಲ್ಲಿಸಲಿ. ದುಃಖ ನೋವುಗಳಲ್ಲಿಯೂ ನಮ್ಮ ಮನಸ್ಸು  ಚೂಸಿಯಾಗಿರಲಿ. ಸದ್ಯಕ್ಕೆ ಇಷ್ಟಾದರೂ ಮಾಡೋಣ ಅನ್ನಿಸಿತು.

ಕೊನೆಯಲ್ಲಿ,

ಭಗವಧ್ಗೀತೆಯಲ್ಲಿ ಹೇಳಿದ ಹಾಗೆ , ' ಬದಲಾಯಿಸಬಲ್ಲದ್ದನ್ನು ಬದಲಾಯಿಸವ ಶಕ್ತಿ ಇರಲಿ, ಬದಲಾಯಿಸಲು ಸಾದ್ಯವಿಲ್ಲದ್ದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿರಲಿ '  ಅಲ್ಲವೇ ...

        
               





               


     
                     .

               


               
         

       

     

           

   

14 comments:

  1. Going gud akka... its really touching.. very gud..

    ReplyDelete
    Replies
    1. Thanks pavi.., comments of u people are the one of inspiration of writting..

      Delete
  2. ಚೈತ್ರ,
    ಮನಸ್ಸನ್ನು ವಿಚಾರಕ್ಕೆ ಹಚ್ಚುವ ಲೇಖನ.

    ReplyDelete
    Replies
    1. ಉಮಕ್ಕ .., ನಿಮ್ಮ ಪ್ರೋತ್ಸಾಹ ಸದಾ ಹೀಗೆ ಇರಲಿ ..

      Delete
  3. adbhuthavada article chaitrakka.idu manavana aantharika baduku matthu samajada naduvina senasatada naija chitrana.kannige kattuvanthiddu baravanige.very very nice...

    ReplyDelete
  4. Tumba chenagiddu akka article.. sakat feel aatu odi.. pratiyondu article super mansige mutto hange barite:)

    ReplyDelete
  5. tumba chennag bardidya chaitra..mansige muttuvahage bardidya..

    ReplyDelete
  6. Touched my heart! Pray god that give parents strength to take care of these kids and make their beautiful.

    ReplyDelete

----------------------------------